ಕದನ ವಿರಾಮ ನಿರ್ಧಾರದಲ್ಲಿ ಮೂರನೇ ವ್ಯಕ್ತಿ ಬಂದಿಲ್ಲ: ಚೀನಾಗೆ ಭಾರತದ ಪ್ರತ್ಯುತ್ತರ
ಹೊಸದಿಲ್ಲಿ: ಈ ವರ್ಷದ ಆರಂಭದಲ್ಲಿ ನಡೆದ ಮಿಲಿಟರಿ ಸಂಘರ್ಷದ ಸಂದರ್ಭದಲ್ಲಿ ನವದೆಹಲಿ ಮತ್ತು ಇಸ್ಲಾಮಾಬಾದ್ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.