ಗವಿ ಸಿದ್ದೇಶ್ವರ ಜಾತ್ರೆಗೆ ಹರಿದು ಬಂದ ಜನ ಸಾಗರ; 10 ಲಕ್ಷ ಭಕ್ತರು ಭಾಗಿ, ದಾಸೋಹದಲ್ಲಿ ಹೊಸ ದಾಖಲೆ
ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮಠದಲ್ಲಿ ಸೋಮವಾರ ನಡೆದ ರಥೋತ್ಸವದಲ್ಲಿ ಸುಮಾರು 10 ಲಕ್ಷ ಭಕ್ತರು ಭಾಗವಹಿಸಿದ್ದರು.