ಭಯೋತ್ಪಾದನೆ ವಿಷಯದಲ್ಲಿ ರಾಜಿ ಇಲ್ಲ : ಮೋದಿ
ಕೌಲಾಲಂಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಪುನರುಚ್ಚರಿಸಿ, ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪಿಸಲು ಭಾರತ ಹಾಗೂ ಮಲೇಷ್ಯಾ ಬದ್ಧವಾಗಿವೆ ಎಂದು ಹೇಳಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟ ಅಗತ್ಯವೆಂದು ಅವರು ಒತ್ತಿ ಹೇಳಿದರು.
ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮೋದಿ ಎಲ್ಲಾ ರೀತಿಯ ಉಗ್ರವಾದವನ್ನು ಖಂಡಿಸಿದ್ದು, ಮಲೇಷ್ಯಾದಲ್ಲಿ ಭಾರತದ ರಾಯಭಾರ ಕಚೇರಿ ಸ್ಥಾಪಿಸುವುದಾಗಿ ಘೋಷಿಸಿದರು.
ಜೊತೆಗೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡಲು ಮಲೇಷ್ಯಾ ಬೆಂಬಲಿಸುವುದಾಗಿ ಭರವಸೆ ನೀಡಿದೆ.
ವಾಣಿಜ್ಯ ಸಂಬಂಧಗಳಲ್ಲಿ ಅಮೆರಿಕನ್ ಡಾಲರ್ಗೆ ಬದಲಾಗಿ ರೂಪಾಯಿ ಮತ್ತು ರಿಂಗಿಟ್ ಬಳಸಿ ವ್ಯಾಪಾರ ನಡೆಸಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಈ ವೇಳೆ ಆರ್ಥಿಕತೆ, ಸೆಮಿಕಂಡಕ್ಟರ್, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಬಲಪಡಿಸಲು ಆರು ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.