DK Shivakumar: ಜೋರಾಯ್ತು ಕುರ್ಚಿ ಪಾಲಿಟಿಕ್ಸ್; ಡಿನ್ನರ್ ಮೀಟಿಂಗ್ ಕರೆದ ಡಿಕೆಶಿ; ಸಿದ್ದರಾಮಯ್ಯಗೂ ಇದ್ಯಾ ಆಹ್ವಾನ?
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಹಾಗೂ ಡಿಸಿಎಂ ಬಣಗಳು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದು, ಕುರ್ಚಿ ಕಾದಾಟಕ್ಕೆ ಕಿಚ್ಚು ಹಚ್ಚಿದ್ದಾರೆ. ಗೊಂದಲಕ್ಕೆ ಹೈಕಮಾಂಡ್ (High Command) ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಡಿನ್ನರ್ ಮೀಟಿಂಗ್ ಕರೆದಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕುರ್ಚಿ ಕಾದಾಟ ನಡುವೆ ಡಿಕೆಶಿ ಡಿನ್ನರ್ ಮೀಟಿಂಗ್ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಮಾರ್ಚ್ 10ರಂದು ಡಿಕೆಶಿ ಡಿನ್ನರ್ ಮೀಟಿಂಗ್
ಬಜೆಟ್ ಅಧಿವೇಶನದ ನಡುವೆ ಮಾರ್ಚ್ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ ಆಯೋಜನೆ ಮಾಡಿದ್ದಾರೆ. ಕಾಂಗ್ರೆಸ್ನ ಶಾಸಕರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಔತಕೂಟ ಆಯೋಜನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯಗೂ ಇದ್ಯಾ ಆಹ್ವಾನ?
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ಎಲ್ಲಾ ಶಾಸಕರನ್ನು ಕೂಡ ಈ ಔತಣ ಕೂಟಕ್ಕೆ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಹಿಂದೆ ಬ್ರೇಕ್ಫಾಸ್ಟ್ ಮೀಟಿಂಗ್ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಸಿಎಂ-ಡಿಸಿಎಂ ಈಗಲೂ ಅದೇ ತಂತ್ರದ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಡಿಕೆಶಿ ಆಯೋಜಿಸಿರುವ ಡಿನ್ನರ್ ಮೀಟಿಂಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನ ಕೂಡ ಕರೆಯುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ನಾಯಕತ್ವ ಬದಲಾವಣೆ ಬಗ್ಗೆ ಸಚಿವರು ಹಾಗೂ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಹೊತ್ತಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್ ಮೀಟಿಂಗ್ಗೆ ಕರೆದಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಭೆಗೆ ಯಾರ್ಯಾರಿಗೆ ಆಹ್ವಾನ ನೀಡ್ತಾರೆ. ಯಾರ್ಯಾರು ಬರ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.