Bengaluru: 'ಟ್ರಬಲ್ ಶೂಟರ್' ರೆಸಾರ್ಟ್ ಪಾಲಿಟಿಕ್ಸ್; 10ಕ್ಕೂ ಹೆಚ್ಚು ಕೈ ಶಾಸಕರು ಬಿಡದಿ ರೆಸಾರ್ಟ್ಗೆ ಶಿಫ್ಟ್
ಬೆಂಗಳೂರು (ಮಾ.13): ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಒಡಿಶಾದಲ್ಲಿ (Odisha) ನಡೆಯಲಿರುವ ರಾಜ್ಯಸಭಾ ಚುನಾವಣೆಯ (Rajyasabha Election) ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ಹಿನ್ನೆಲೆ ಒಡಿಶಾದ (Assam) 14ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು (Congress MLAs) ಬೆಂಗಳೂರಿನ ಬಿಡದಿ ರೆಸಾರ್ಟ್ಗೆ ಶಿಫ್ಟ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್
ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಹಾಗೂ ಕೈ ಮುಖಂಡರು ಸ್ವಾಗತಿಸಿದರು. ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಗೇಮ್ಸ್ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
10ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
ಒಡಿಶಾ ಎಲೆಕ್ಷನ್ನಲ್ಲಿ ಅಡ್ಡ ಮತದಾನ ತಡೆಯಲು ಟ್ರಬಲ್ ಶೂಟರ್ ಡಿಕೆಶಿ ಕೈ ಶಾಸಕರನ್ನ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರಿನ ಏರ್ಪೋರ್ಟ್ಗೆ 10ಕ್ಕೂ ಹೆಚ್ಚು ಶಾಸಕರು ಬಂದಿಳಿದಿದ್ದಾರೆ. ಏಳು ಇನೋವಾ ಕಾರುಗಳಲ್ಲಿ ಶಾಸಕರನ್ನ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.