ಬಿಜೆಪಿ ಗೆದ್ದಿದ್ದ ಕ್ಷೇತ್ರಗಳು ಎಐಎಡಿಎಂಕೆ ಪಾಲು: ಅಣ್ಣಾಮಲೈ ಸ್ಪರ್ಧೆ ಅನುಮಾನ
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಮತದಾನ ನಡೆಯಲಿದೆ.
ಎನ್ಡಿಎ ಮೈತ್ರಿಕೂಟದಲ್ಲಿರುವ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ, 27 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ತಿರುನಲ್ವೇಲಿ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರಗಳನ್ನು ತನ್ನಲ್ಲೇ ಉಳಿಸಿಕೊಂಡಿದೆ.
ಹೀಗಾಗಿ, 2021ರ ಚುನಾವಣೆಯಲ್ಲಿ ತಿರುನಲ್ವೇಲಿಯಲ್ಲಿ ಗೆದ್ದಿದ್ದ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ನಟ, ರಾಜಕಾರಣ ಕಮಲ್ ಹಾಸನ್ ಅವರನ್ನು ಮಣಿಸಿದ್ದ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಬೇರೆ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಕನ್ಯಾಕುಮಾರಿ: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಿರುವ ಎನ್ಡಿಎ ಮೈತ್ರಿಕೂಟದ ಸೀಟು ಹಂಚಿಕೆ ವೇಳೆ ತಿರುನಲ್ವೇಲಿ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರಗಳು ಬಿಜೆಪಿಗೆ ಒಲಿದಿಲ್ಲ.
ಹೀಗಾಗಿ, ಈ ಕ್ಷೇತ್ರಗಳಲ್ಲಿ ಇರುವ ಬಿಜೆಪಿ ಶಾಸಕರೇ ಬೇರೆ ಕ್ಷೇತ್ರಗಳಿಗೆ ವಲಸೆ ಹೋಗುವಂತಾಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23ರಂದು ಮತದಾನ ನಡೆಯಲಿದೆ.
ಎನ್ಡಿಎ ಮೈತ್ರಿಕೂಟದಲ್ಲಿರುವ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ, 27 ಸ್ಥಾನಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ತಿರುನಲ್ವೇಲಿ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರಗಳನ್ನು ತನ್ನಲ್ಲೇ ಉಳಿಸಿಕೊಂಡಿದೆ.
ಹೀಗಾಗಿ, 2021ರ ಚುನಾವಣೆಯಲ್ಲಿ ತಿರುನಲ್ವೇಲಿಯಲ್ಲಿ ಗೆದ್ದಿದ್ದ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಹಾಗೂ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ನಟ, ರಾಜಕಾರಣ ಕಮಲ್ ಹಾಸನ್ ಅವರನ್ನು ಮಣಿಸಿದ್ದ ಮಹಿಳಾ ಮೋರ್ಚಾ ಅಧ್ಯಕ್ಷೆ ವನತಿ ಶ್ರೀನಿವಾಸನ್ ಬೇರೆ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.