ಚುನಾವಣೆಗೆ ಒಂದು ದಿನ ಬಾಕಿ ಇರುವಾಗ 10 ಭರವಸೆಗಳನ್ನು ಘೋಷಿಸಿದ ಎಐಎಡಿಎಂಕೆ
ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಎಐಎಡಿಎಂಕೆ ಪಕ್ಷವು ಮತ್ತೆ 10 ಭರವಸೆಗಳನ್ನು ಘೋಷಿಸಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಚುನಾವಣಾ ಪ್ರಣಾಳಿಕೆಯ ಭರವಸೆಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ, ಎಐಎಡಿಎಂಕೆ ನೀಡಿರುವ ಭರವಸೆಗಳ ಸಂಖ್ಯೆ 297ರಿಂದ 307ಕ್ಕೆ ಏರಿಕೆಯಾಗಿವೆ. * ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳನ್ನು ತಡೆಯಲು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ 24/7 ಮೇಲ್ವಿಚಾರಣಾ ಕೊಠಡಿಗಳನ್ನು ಸ್ಥಾಪಿಸುವುದು. * ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ, ಆಯ್ದ 10 ಲಕ್ಷ ನಿರುದ್ಯೋಗಿ ಯುವಕರಿಗೆ ದ್ವಿಚಕ್ರ ವಾಹನ ಖರೀದಿಸಲು ತಲಾ ₹10,000 ಸಬ್ಸಿಡಿ ನೀಡಲಾಗುವುದು.