Select Location
All Locations
State
Region
City / District
‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’; ವಿಜಯ್ ಪರ ಬ್ಯಾಟ್ ಬೀಸಿದ ಕಮಲ್ ಹಾಸನ್

‘ಜನರ ತೀರ್ಪಿಗೆ ಗೌರವ ಸಿಗಲೇಬೇಕು’; ವಿಜಯ್ ಪರ ಬ್ಯಾಟ್ ಬೀಸಿದ ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಸರ್ಕಾರ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಈ ಬಾರಿಯ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಆಗ್ರಹಿಸಿದ್ದಾರೆ.

ತಮಿಳುನಾಡು ರಾಜಕೀಯದ ಈ ಬಿಕ್ಕಟ್ಟಿನ ಕುರಿತು ಟ್ವಿಟರ್​ನಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಕಮಲ್ ಹಾಸನ್, ವಿಜಯ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ‘ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅತಿ ದೊಡ್ಡ ಪಕ್ಷವಾಗಿರುವ ವಿಜಯ್ ಅವರನ್ನು ಸರ್ಕಾರ ರಚಿಸಲು ಕರೆಯದಿರುವುದು ತಮಿಳುನಾಡು ಜನತೆ ನೀಡಿದ ತೀರ್ಪಿಗೆ ಮಾಡುವ ಅವಮಾನ’ ಎಂದು ಅವರು ಕಿಡಿಕಾರಿದ್ದಾರೆ. ‘ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಆಡಳಿತ ನಡೆಸುವ ಅಧಿಕಾರವನ್ನು ಜನತೆ ನೀಡಿಲ್ಲ. ತಮಿಳುನಾಡಿನ ಇತಿಹಾಸದಲ್ಲೇ ಇಂತಹ ತೀರ್ಪು ಹಿಂದೆಂದೂ ಬಂದಿರಲಿಲ್ಲ. ನನ್ನ ಸಹೋದರ ಎಂ.ಕೆ. ಸ್ಟಾಲಿನ್ ಅವರು, ನಾವು ಜನರ ತೀರ್ಪನ್ನು ಗೌರವಿಸುತ್ತೇವೆ ಮತ್ತು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಘೋಷಿಸಿದ್ದಾರೆ. 

ಅವರ ಈ ರಾಜಕೀಯ ಮುತ್ಸದ್ದಿತನವನ್ನು ನಾನು ಗೌರವಿಸುತ್ತೇನೆ’ ಎಂದು ಕಮಲ್ ಹಾಸನ್ ಹೇಳಿದ್ದಾರೆ. ‘ಈಗ ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಸಹ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಬೇಕಿದೆ. ಈಗಾಗಲೇ ಆಯ್ಕೆಯಾಗಿರುವ 233 ಸದಸ್ಯರು ಇನ್ನೂ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದಿರುವುದು ರಾಜ್ಯಕ್ಕೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗುತ್ತಿರುವ ದೊಡ್ಡ ಹಾನಿ’ ಎಂದು ಅವರು ಕಳವಳ ಹೊರಹಾಕಿದರು.  ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ನಾನು ಮಾತನಾಡುತ್ತಿರುವುದು ಕೇವಲ ಪಕ್ಷದ ಪರವಾಗಿ ಅಲ್ಲ, ಬದಲಿಗೆ ಒಬ್ಬ ಭಾರತೀಯ ಪ್ರಜೆಯಾಗಿ ಸಾಂವಿಧಾನಿಕ ಆಶಯದ ಧ್ವನಿಯಾಗಿ. ತಮಿಳುನಾಡು ಜನರ ತೀರ್ಪಿಗೆ ಸರಿಯಾದ ಗೌರವ ಸಿಗಲೇಬೇಕು’ ಎಂದು ಅವರು ಆಶಿಸಿದ್ದಾರೆ. 


TV9 Kannada 48 minutes ago
Home Flash News