Select Location
All Locations
State
Region
City / District
Karnataka Rains: ಕರಾವಳಿಯಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ; ಹವಾಮಾನ ಇಲಾಖೆ ನೀಡಿದ ವಾರ್ನಿಂಗ್ ಏನು?

Karnataka Rains: ಕರಾವಳಿಯಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ; ಹವಾಮಾನ ಇಲಾಖೆ ನೀಡಿದ ವಾರ್ನಿಂಗ್ ಏನು?

ಮಂಗಳೂರು/ಬೆಂಗಳೂರು: ಕರಾವಳಿ ಭಾಗಗಳಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ವೇಗ ಪಡೆಯುತ್ತಿದ್ದು, ಮೇ 12ರ ಸುಮಾರಿಗೆ ತಮಿಳುನಾಡು ಕರಾವಳಿ ಸಮೀಪ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪರಿಣಾಮ ಮೇ 13ರಿಂದ ಕರ್ನಾಟಕದ ಕರಾವಳಿ, ಕೇರಳ ಹಾಗೂ ತಮಿಳುನಾಡಿನ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಲಕ್ಷಣಗಳಿವೆ. ಮೇ 15ರಿಂದ ಹಿಂದೂ ಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ದಕ್ಷಿಣ ಪಶ್ಚಿಮ ಮುಂಗಾರು ಮಾರುತಗಳ ಚಲನೆ ಚುರುಕುಗೊಳ್ಳಲಿದ್ದು, ಕರಾವಳಿಗೆ ಮುಂಗಾರು ಪೂರ್ವ ಮಳೆಯ ಪ್ರವೇಶ ಸಾಧ್ಯತೆ ಹೆಚ್ಚಿದೆ. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹಲವೆಡೆ ಮುಂದಿನ ನಾಲ್ಕೈದು ದಿನಗಳ ಕಾಲ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಹಾಗೂ ಸಮುದ್ರ ತೀರ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಗಾರು ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಿರುವುದರಿಂದ ಈ ಬಾರಿ ಮುಂಗಾರು ಸ್ವಲ್ಪ ಮುಂಚಿತವಾಗಿ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ.


Asianet News 1 hour ago
Home Flash News