Select Location
All Locations
State
Region
City / District
ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಕುಷ್ಟಗಿಯವರೆಗೆ ವಿಸ್ತರಿಸಲು ಹೆಚ್ಚಿದ ಒತ್ತಾಯ, ಪ್ರಯೋಜನವೇನು?

ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಕುಷ್ಟಗಿಯವರೆಗೆ ವಿಸ್ತರಿಸಲು ಹೆಚ್ಚಿದ ಒತ್ತಾಯ, ಪ್ರಯೋಜನವೇನು?

ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ. ಈ ವಿಸ್ತರಣೆಯು ಕುಷ್ಟಗಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ಜನರಿಗೆ ಅನುಕೂಲವಾಗಲಿದೆ.

ಕುಷ್ಟಗಿ: ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸುವಂತೆ ಒತ್ತಾಯಿಸಿ ನೈಋತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಬೇಲಾಮೀನಾ ಅವರಿಗೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯವರು ಮನವಿ ಸಲ್ಲಿಸಿದರು. ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿರೇಶ ಬಂಗಾರಶೆಟ್ಟರ ಮಾತನಾಡಿ, ಬೆಂಗಳೂರು ಹುಬ್ಬಳ್ಳಿ ಚಲಿಸುವ ಸೂಪರ್ ಫಾಸ್ಟ್ ರೈಲನ್ನು ಗದಗ, ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಯವರೆಗೆ ವಿಸ್ತರಿಸಬೇಕು ಎಂದರು.

ಗದಗ ರೈಲ್ವೆ ಹೋರಾಟ ಸಮಿತಿಯವರು ಈಗಾಗಲೇ ಆಂದೋಲನ ಪ್ರಾರಂಭಿಸಿದ್ದು, ಈ ರೈಲನ್ನು ಗದಗಕ್ಕೆ ವಿಸ್ತರಿಸುವಂತೆ ಒತ್ತಾಯಿಸಿ ಹಲವಾರು ಮನವಿ ಸಲ್ಲಿಸಿದ್ದಾರೆ. ಮುಂದಿನ ಹಂತವಾಗಿ, ಈ ರೈಲನ್ನು ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿಗೆ ವಿಸ್ತರಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದರು.ಈ ಸೌಲಭ್ಯ ಕುಷ್ಟಗಿ ತಾಲೂಕು ಮಾತ್ರವಲ್ಲದೆ,ಗಜೇಂದ್ರಗಡ, ಇಲಕಲ್, ಯಲಬುರ್ಗಾ, ಕುಕನೂರು ಮತ್ತು ಗದಗ ಜಿಲ್ಲೆಯ ಜನರಿಗೂ ಪ್ರಯೋಜನ ನೀಡುತ್ತದೆ. ಇದು ವೈದ್ಯಕೀಯ ಅಗತ್ಯ, ಹೈಕೋರ್ಟ್, ಶಿಕ್ಷಣ ಮತ್ತು ವ್ಯವಹಾರಕ್ಕೆ ಅನುಕೂಲಕರವಾಗಲಿದೆ ಕಾರ್ಮಿಕರಿಗೂ ಇದು ಪ್ರಯೋಜನ ನೀಡುತ್ತದೆ ಎಂದರು.


Asianet News 1 hour ago
Home Flash News