Select Location
All Locations
State
Region
City / District
NITI Aayog Meeting : ಇದೇ ಮೊದಲ ಬಾರಿಗೆ ಎಲ್ಲಾ 28 ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಗೆ ಹಾಜರ್!

NITI Aayog Meeting : ಇದೇ ಮೊದಲ ಬಾರಿಗೆ ಎಲ್ಲಾ 28 ಮುಖ್ಯಮಂತ್ರಿಗಳು ನೀತಿ ಆಯೋಗ ಸಭೆಗೆ ಹಾಜರ್!

ದೆಹಲಿ (ಜೂ.12): ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ದೇಶದ 28 ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳು (ನೀತಿ ಆಯೋಗ) NITI Aayog Governing Council ಸಭೆಯಲ್ಲಿ ಭಾಗವಹಿಸಿದ್ದಾರೆ. ಒಕ್ಕೂಟ ವ್ಯವಸ್ಥೆಗೆ ಇದೊಂದು ಮೈಲಿಗಲ್ಲು. ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು 'ವಿಕಸಿತ ಭಾರತಕ್ಕಾಗಿ ಸಮಗ್ರ ಮಾನವ ಅಭಿವೃದ್ಧಿ 2047' ಎಂಬ ವಿಷಯದ ಅಡಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಯಾವುದೇ ಬಾಯ್‌ಕಾಟ್ ಅಥವಾ ಗೈರುಹಾಜರಿಲ್ಲದೆ ಕರ್ನಾಟಕ, ಕೇರಳ ತಮಿಳು ನಾಡು ಸೇರಿದಂತೆ ಎಲ್ಲ ಮುಖ್ಯಮಂತ್ರಿಗಳು ಭಾಗಿಯಾಗುವ ಮೂಲಕ ರಾಜಕೀಯ ಜಗಳಗಳನ್ನು ಬದಿಗಿಟ್ಟು ಏಕತೆಯ ಸಂದೇಶ ಸಾರಿದ್ದಾರೆ. ಈ ಹಿಂದೆ ಹಿಂದೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ನೀತಿ ಆಯೋಗ(NITI Aayog) ಸಭೆಗಳನ್ನು ಬಾಯ್‌ಕಾಟ್ ಮಾಡುತ್ತಿದ್ದರು. ಆದರೆ ಈ ಬಾರಿ ಇದನ್ನೂ ಪೂರ್ಣವಾಗಿ ತೊರೆಯಲಾಗಿದೆ. ಎಲ್ಲಾ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳ ಅಭಿವೃದ್ಧಿ ಯೋಜನೆಗಳನ್ನು ಮಂಡಿಸಿ, ರಾಷ್ಟ್ರೀಯ ಅಭಿವೃದ್ಧಿಗೆ ಒಂದಾದರು.

ಮುಖ್ಯಮಂತ್ರಿಗಳ ಜೊತೆಗೆ, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳು ಸಹ ಚರ್ಚೆಗಳಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಬಗ್ಗೆ ಪ್ರಧಾನಿ ಮೋದಿಯವರು ಮಾತನಾಡಿ, ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಗಳ ಪೂರ್ಣ ಭಾಗವಹಿಸಿರುವುದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಕಲ್ಪನೆಯನ್ನು ಕೇಂದ್ರ ಮತ್ತು ರಾಜ್ಯಗಳ ನಡುವಿನ ನಿಕಟ ಸಹಯೋಗದಿಂದ ಮಾತ್ರ ಸಾಧಿಸಬಹುದು ಎಂದು ಪ್ರತಿಪಾದಿಸಿದರು ಹಿಂದಿನ ಬಾಯ್‌ಕಾಟ್‌ಗಳು ಈಗ ಇತಿಹಾಸ! ಹಿಂದಿನ ಸಭೆಗಳಲ್ಲಿ ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಅರವಿಂದ್ ಕೇಜ್ರಿವಾಲ್, ಸಿದ್ದರಾಮಯ್ಯ, ಪಿಣರಾಯಿ ವಿಜಯನ್, ಸೇರಿದಂತೆ ಹಲವು ವಿರೋಧ ಪಕ್ಷ ಮುಖ್ಯಮಂತ್ರಿಗಳು ಸಭೆಗೆ ಗೈರುಹಾಜರಾಗಿದ್ದರು. ಆದರೆ ಈ ಬಾರಿ ಯಾರೂ ಹಿಂದೆ ಸರಿಯದೆ ಭಾಗವಹಿಸಿದ್ದು ಗಮನಾರ್ಹ. ರಾಷ್ಟ್ರೀಯ ಅಭಿವೃದ್ಧಿಗೆ ಹೊಸ ಆಯಾಮ ಈ ಸಭೆಯು ರಾಜ್ಯಗಳ ನಡುವಿನ ಸಹಕಾರ ಹೆಚ್ಚಿಸುವ ಮೂಲಕ ಭಾರತದ ಒಟ್ಟಾರೆ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ದೇಶದ ಪ್ರಗತಿಗೆ ಒತ್ತು ನೀಡುವ ಮಾದರಿಯಾಗಿ ಈ ಬೆಳವಣಿಗೆಯನ್ನು ನೋಡಲಾಗುತ್ತಿದೆ.


Asianet News 2 hours ago
Home Flash News